ಹುಬ್ಬಳ್ಳಿ: ಎಸ್. ಎಸ್. ಕೆ ಸಮಾಜದ ಮುಖಂಡರಾದ ಪ್ರಕಾಶ ಬುರಬುರೆ ಅವರು ನೂರಾರು ಕಾರ್ಯಕರ್ತರೊಂದಿಗೆ ಶಾಸಕರಾದ ಪ್ರಸಾದ್ ಅಬ್ಬಯ್ಯ ಹಾಗೂ ಹುಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಅಲ್ತಾಫ್ ಹಳ್ಳೂರ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪ್ರಕಾಶ ಬುರಬುರೆ ಈ ಹಿಂದೆ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇತ್ತಿಚೆಗೆ ಬಿಜೆಪಿ ತೊರೆದು ಇದೀಗ ಕಾಂಗ್ರೆಸ್ ಮರು ಸೇರ್ಪಡೆಯಾಗಿದ್ದಾರೆ. ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.