ನವಲಗುಂದ: ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವಲ್ಲಿ ಸರಕಾರ ಯಶಸ್ವಿಯಾಗಿದೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್, ಸಚಿವ ಶಿವಾನಂದ ಪಾಟೀಲ್ ಅವರ ಪ್ರಯತ್ನದಿಂದ ಸಮಸ್ಯೆ ಬಗೆಹರಿದಿದೆ. ರೈತರಿಗೆ ಪ್ರತಿ ಟನ್ ಕಬ್ಬಿಗೆ ಸಕ್ಕರೆ ಮಾಲೀಕರಿಂದ 3250 ರೂ. ಮತ್ತು ಸರಕಾರದಿಂದ 50 ರೂ. ಸೇರಿ ಒಟ್ಟು 3300 ರೂ. ನೀಡಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಬೆಳಗಾವಿಯ ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸಿದಾಗಲೂ ಸರಕಾರ ಬೇಡಿಕೆ ಈಡೇರಿಸಿತ್ತು ಎಂದು ಅವರು ತಿಳಿಸಿದರು.