ಮುಂಡಗೋಡ: ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ: ಎಸ್ಐಟಿ ತನಿಖೆಗೆ ಆಗ್ರಹಿಸಿ ಪಟ್ಟಣದಲ್ಲಿ ತಹಸೀಲ್ದಾರರಿಗೆ ಮನವಿ
ಕಾರವಾರ ತಾಲೂಕಿನ ಕದ್ರಾದ ಯುವತಿ ರಿಶೇಲ್ ಡಿಸೋಜಾ ಅವರ ಅಸ್ವಾಭಾವಿಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಒದಗಿಸಬೇಕು ಮತ್ತು ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿ ಮಹಿಳಾ ಸಾಂತ್ವಾನ ಕೇಂದ್ರದಿಂದ ಗುರುವಾರ ಮಧ್ಯಾಹ್ನ 3.30 ಸುಮಾರು ಮುಂಡಗೋಡ ತಹಸೀಲ್ದಾರರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.