ಹಿರಿಯೂರಿನ ವಾಣಿ ವಿಲಾಸ ಸಾಗರ ಜಲಾಶಯದ ಕೋಡಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಯುವಕನನ್ನ ರಕ್ಷಣೆ ಮಾಡಲಾಗಿದೆ. ಬಾನುವಾರ ಸಂಜೆ 5 ಗಂಟೆ ವೇಳೆ ಘಟನೆ ನಡೆದಿದ್ದು ಯುವಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನೂ ಬಾನುವಾರವಾದ್ದರಿಂದ ಇಂದು ವಾಣಿ ವಿಲಾಸ ಸಾಗರ ಜಲಾಶಯದ ಕೋಡಿ ವೀಕ್ಷಣೆಗೆ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು ಈ ವೇಳೆ ಅಲ್ಲೆ ಇದ್ದ ಯುವಕನೊಬ್ಬ ಹುಚ್ಚು ಸಾಹಸ ಮಾಡಲು ಹೋಗಿದ್ದಾನೆ.