ಹಳಿಯಾಳ : ಅರಣ್ಯ ಸಂಪತ್ತು ಸಂರಕ್ಷಣೆ, ವನಸಂಪತ್ತು ವೃದ್ಧಿ ಮತ್ತು ಪರಿಸರ ಸಮತೋಲನ ಕಾಯ್ದುಕೊಳ್ಳುವಲ್ಲಿ ಅರಣ್ಯ ಇಲಾಖೆಯ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಅವರು ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕರ್ನಾಟಕ ಅರಣ್ಯ ಇಲಾಖೆ, ಕೆನರಾ ವೃತ್ತ ಶಿರಸಿ ಹಾಗೂ ಪ್ರಾದೇಶಿಕ ವಿಭಾಗ ಹಳಿಯಾಳ ಇವರ ಆಶ್ರಯದಲ್ಲಿ ಹಳಿಯಾಳ ಪಟ್ಟಣದ ಗೃಹ ಮಂಡಳಿಯ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಲಿರುವ ಅರಣ್ಯ ಅಧಿಕಾರಿಗಳ ವಸತಿ ಸಂಕೀರ್ಣದ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸ್ಥಳೀಯ ಜನ