ಬೆಂಗಳೂರು ಉತ್ತರ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪ ನಿರಾಕರಿಸಿದ ನಟ ದರ್ಶನ್; ನ.10ಕ್ಕೆ ಸಾಕ್ಷಿಗಳ ವಿಚಾರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಎಲ್ಲ ಆರೋಪಿಗಳು ಸೋಮವಾರ ಹಾಜರಾದರು. ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು ಕೂಡ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಹಾಗಾಗಿ ಮುಂದಿನ ಹಂತದ ಸಾಕ್ಷಿಗಳ ವಿಚಾರಣೆಗೆ ನ್ಯಾಯಾಲಯ ದಿನಾಂಕ ನಿಗದಿ ಮಾಡಿದೆ. ನವೆಂಬರ್ 10ರಂದು ವಿಚಾರಣೆಗೆ ದಿನಾಂಕ ನಿಗದಿ ಆಗಿದೆ.