ಗದಗ: ರಾಜ್ಯ ಸರ್ಕಾರ ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕುತ್ತಿದೆ: ನಗರದಲ್ಲಿ ಶಾಸಕ ಡಾ. ಚಂದ್ರು ಲಮಾಣಿ
Gadag, Gadag | Jun 1, 2025 ರಾಜ್ಯ ಸರ್ಕಾರ ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕುತ್ತಿದೆ. ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮಿ ಹಣವನ್ನು ಮಹಿಳೆಯರಿಗೆ ನೀಡಿಲ್ಲ. ಆದರೆ, ಗ್ಯಾರಂಟಿ ಸಮಿತಿಯಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಂದಿನ ಆಗಸ್ಟ್ ತಿಂಗಳವರೆಗಿನ ಹಣವನ್ನು ಬಿಡುಗಡೆ ಮಾಡಿದೆ. ಈ ಮೂಲಕ ತೆರಿಗೆ ಹಣವನ್ನು ತಮ್ಮ ಕಾರ್ಯಕರ್ತರಿಗೆ ಹಂಚುತ್ತಿದೆ ಅಂತ ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.