ಮೈಸೂರು ನಗರದಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡಿದ್ದ ವಸ್ತು ಪ್ರದರ್ಶನವನ್ನು ಉತ್ತರ ಕರ್ನಾಟಕದ ದೊಡ್ಡ ಜಿಲ್ಲೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನ.30 ರಿಂದ ಜ.1ರವರೆಗೆ ಆಯೋಜಿಸಲಾಗಿದೆ ಎಂದು ಸೋಮವಾರ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್ ಮಾತನಾಡಿದರು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದಿಂದ ಮೈಸೂರು ದಸರಾದಲ್ಲಿ ವಸ್ತು ಪ್ರದರ್ಶನವನ್ನು ಆಯೋಜಿಸುತ್ತಾ ಬಂದಿದ್ದೇವೆ. ಬೆಳಗಾವಿಯಲ್ಲಿ ನಡೆಯುವ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಲಿದ್ದು ಸಹಕಾರಿ ಹಾಲು ಒಕ್ಕೂಟ,ಕೃಷಿ,ತೋಟಗಾರಿಕೆ,ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ ಭಾಗಿಯಾಗಲಿವೆ ಎಂದರು.