ಸಾಸಲು ಗ್ರಾಮದ ದೇವಸ್ಥಾನಗಳ ವಿವಿಧ ಕಾರ್ಯಕ್ರಮದಲ್ಲಿ ಶಾಸಕ ಎಂ ಚಂದ್ರಪ್ಪ ಬಾಗಿಯಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಹೊಳಲ್ಕೆರೆ ತಾಲ್ಲೂಕಿನ ಸಾಸಲು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಈಶ್ವರ ಸ್ವಾಮಿಯ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಶ್ರೀ ಮಹಾಗಣಪತಿ ದೇವಸ್ಥಾನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಇನ್ನೂ ಪಾಂಡೋಮಟ್ಟಿ ಕಮ್ಮತ್ತಹಳ್ಳಿ ವಿರಕ್ತಮಠದ ಶ್ರೀ ಡಾ. ಗುರುಬಸವ ಮಹಾಸ್ವಾಮಿಗಳು, ಮಾಡಳು ಶ್ರೀ ನಿರಂಜನಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಶಾಸಕರು ಭಾಗವಹಿಸಿದ್ದಾರೆ