ಸಿದ್ಧಾಪುರ: ತಾಲೂಕಿನ ಹೊಸೂರ ಸೇರಿದಂತೆ ವಿವಿಧೆಡೆ ಶಾಸಕ ಭೀಮಣ್ಣರಿಂದ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
ಸಿದ್ದಾಪುರ : ಸಿದ್ದಾಪುರ ತಾಲೂಕು ಹಾಗೂ ಪಟ್ಟಣದ ವಿವಿಧ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಸಿದ್ದಾಪುರ ಪಟ್ಟಣ ವ್ಯಾಪ್ತಿಯ ಖಾನಾಪುರ-ತಾಳಗುಪ್ಪ ರಾಜ್ಯ ಹೆದ್ದಾರಿಯ ರಸ್ತೆ ಸುಧಾರಣೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿ ತ್ವರಿತಗತಿಯಲ್ಲಿ ಕೆಲಸ ಆರಂಭಿಸಿ ಗುಣಮಟ್ಟದ ರಸ್ತೆ ನಿರ್ಮಿಸುವಂತೆ ಸೂಚಿಸಿದರು.ಬಳಿಕ ತಾಲೂಕಿನ ಹೂಸೂರ ಎಸ್.ಸಿ ಕೇರಿಯ ರಸ್ತೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿದರು.