ಧಾರವಾಡ: ಶಾಸಕರಾದ ವಿನಯ್ ಕುಲಕರ್ಣಿ ಅವರ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಲೋಕೂರು ಗ್ರಾಮದ ಉಪ್ಪಿನ ಬೆಟಗೇರಿ ರಸ್ತೆಯಿಂದ ಕಲ್ಲೂರು ಹಳ್ಳದ ರಸ್ತೆಯ ಅಭಿವೃದ್ಧಿ ಕಾಮಗಾರಿ ಪೂಜೆಯನ್ನು ಕರ್ನಾಟಕ ಸರ್ಕಾರ ವನ್ಯಜೀವಿ ಮಂಡಳಿ ಸದಸ್ಯರು ಹಾಗೂ ಶಾಸಕರಾದ ವಿನಯ್ ಕುಲಕರ್ಣಿ ಅವರ ಪುತ್ರಿ ವೈಶಾಲಿ ವಿನಯ್ ಕುಲಕರ್ಣಿ ಅವರು ಭೂಮಿಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಉಪ್ಪಿನ ಬೆಟಗೇರಿ ಗ್ರಾಮದ ಸಂತೆ/ಮಾರುಕಟ್ಟೆ ಸ್ಥಳದ ಅಭಿವೃದ್ಧಿ ಕಾಮಗಾರಿಗೂ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.