ಭಾಲ್ಕಿ ನಗರದಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಇಂದು ಸಂಸದರಾದ ಶ್ರೀ ಸಾಗರ ಖಂಡ್ರೆ ರವರು ಧೀಡರನೇ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯ ಬಗ್ಗೆ ಖುದ್ದಾಗಿ ಪರಿಶೀಲನೆಯನ್ನು ನಡೆಸಿದರು. ಈ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಆಗುತ್ತಿರುವ ಕುಂದು ಕೊರತೆಗಳ ಬಗ್ಗೆ ಖುದ್ದಾಗಿ ಅವರಿಂದಲೇ ಸಂಸದರು ತಿಳಿದುಕೊಂಡು, ಕೂಡಲೇ ಈ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಿಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದರು.