ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಂತಾಪ ದಾವಣಗೆರೆ ಜಿಲ್ಲೆಯ ಅಭಿವೃದ್ಧಿಯ ಹರಿಕಾರರು ಪ್ರತಿಯೊಬ್ಬ ವ್ಯಕ್ತಿಯನ್ನು ಸಮಾನವಾಗಿ ಕಾಣುವ, ಸಮಾಜದಲ್ಲಿ ಸಾಮಾಜಿಕ, ಆರ್ಥಿಕ, ಹಿಂದುಳಿದ ಸಮುದಾಯಗಳನ್ನ ಅಭಿವೃದ್ಧಿಪಡಿಸುವಂತಹ ಉದ್ದೇಶದಿಂದ ಅವರು ಮಾಡಿದಂತ ಶ್ರಮ ಅಪಾರ. ಶಾಮನೂರು ಶಿವಶಂಕರಪ್ಪ ಅವರ ಸಾಧನೆ ಅಪಾರ. ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಚಿವರಾಗಿದ್ದಾಗ ಮಾಡಿದ ಕಾರ್ಯಗಳು ಎಂದೆಂದಿಗೂ ಶ್ಲಾಘನೀಯ ಎಂದು ತಿಳಿಸಿದ್ದಾರೆ. ಶಿಕ್ಷಣ ಸಂಸ್ಥೆಯ ಹರಿಕಾರರು, ಸಮಾಜ ಸುಧಾರಕರಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸೇವೆ ಸಲ್ಲಿಸಿದವರು ಎಂದಿದ್ದಾರೆ