ಹಳಿಯಾಳ: ಪಟ್ಟಣದಲ್ಲಿ ಓಟ್ ಚೋರಿ ವಿರುದ್ದ ಕಾಂಗ್ರೆಸ್ ಪಕ್ಷದಿಂದ ಸಹಿ ಸಂಗ್ರಹಣಾ ಅಭಿಯಾನಕ್ಕೆ ಆರ್.ವಿ.ದೇಶಪಾಂಡೆ ಚಾಲನೆ
ಹಳಿಯಾಳ : ಓಟ್ ಚೋರಿ ವಿರುದ್ದ ಹಳಿಯಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಸಹಿ ಸಂಗ್ರಹಣಾ ಅಭಿಯಾನಕ್ಕೆ ಹಳಿಯಾಳ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದ ಮುಂಭಾಗದಲ್ಲಿ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆಯವರು ಇಂದು ಸೋಮವಾರ ಮಧ್ಯಾಹ್ನ 12:00 ಗಂಟೆ ಸುಮಾರಿಗೆ ಚಾಲನೆಯನ್ನು ನೀಡಿದರು. ಆನಂತರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದ ಮುಂಭಾಗದಿಂದ ಪಟ್ಟಣದ ವನಶ್ರೀ ವೃತ್ತದವರೆಗೆ ಓಟ್ ಚೋರಿ ವಿರುದ್ದ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಯಿತು.