ಕಲಬುರಗಿ: ಓಕಳಿ ಸರ್ಕಾರಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ, ನೂತನ ಎಸ್ಡಿಎಂಸಿ ರಚನೆ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಓಕಳಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಭಾರಿ ಮುಖ್ಯಗುರುಗಳಾದ ಗುರುಬಸಪ್ಪ ರಕ್ಕಸಗಿ ಮಾತನಾಡಿ, ಸ್ವಾಮಿ ವಿವೇಕಾನಂದರು ಸಾಗಿಬಂದ ಮಾರ್ಗಗಳನ್ನು ವಿವರಿಸಿದರು. ಉತ್ತಮ ಭಾಷಣ ಮಾಡಿದ ಮಕ್ಕಳಿಗೆ ಸ್ಕೂಪ್ಸ್ ಕಮಲಾಪುರ ಅಧ್ಯಕ್ಷೆ ವಿಶಾಲಾಕ್ಷಿ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ನೂತನವಾಗಿ ರಚನೆಯಾದ ಎಸ್ಡಿಎಂಸಿ ಪದಾಧಿಕಾರಿಗಳು ಹಾಗೂ ನೂತನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮಧುಮಾಲತಿ ದೋಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಎಸ್ಡಿಎಂಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಪಿಲಗೌಡ ಪೊಲೀಸ್ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು ಎಂದು ಸೋಮವಾರ 7 ಗಂಟೆಗೆ ಮಾಹಿತಿ ಲಭ್ಯವಾಗಿದೆ.