ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ನಾಗರೀಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರಿಂದ ಪಾಲಿಕೆಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಆಯುಕ್ತರು ನಾಗರಿಕರಿಂದ ದೂರವಾಣಿ ಮೂಲಕ 37 ಅಹವಾಲು ಆಲಿಸಿದರು. ಈ ವೇಳೆ ಮಾತನಾಡಿದ ಆಯುಕ್ತರು ನಾಗರೀಕರಿಂದ ಸ್ವೀಕರಿಸುವ ಸಮಸ್ಯೆಗಳನ್ನು ಪರಿಹರಿಸದಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದೆಂದು ಆಯುಕ್ತರು ಅಧಿಕಾರಿಗಳಿಗೆ ಎಚ್ಚರಿಗೆ ನೀಡಿದರು.