ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅವ್ಯಾಹುತವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಹಟ್ಟಿ ಚಿನ್ನದ ಗಣಿಯ ನಾಲ್ಕು ಅಧಿಕಾರಿಗಳು ಹಾಗೂ ಇಬ್ಬರು ಗುತ್ತಿಗೆದಾರರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. ಯಾವುದೇ ಕ್ರಮವಾಗದೇ ಹೋದಲ್ಲಿ ಮತ್ತೊಮ್ಮೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವದಾಗಿ ಸಮಾಜಿಕ ಕಾರ್ಯಕರ್ತರ ಹನಮಂತಪ್ಪ ಭಂಗಿ ಹೇಳಿದರು. ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಕೃಷ್ಣ ನದಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ದಂಧೆಯ ಹಿಂದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಪಾಟೀಲ್ ಇಟಗಿ ಹಾಗೂ ಯಾದಗಿರಿ ಜಿಲ್ಲೆ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಇವರ ಕೈವಾಡವಿದೆ ಎಂದು ಆರೋಪಿಸಿದರು.