ಹಳಿಯಾಳ : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಬೆಂಗಳೂರು,ಉತ್ತರ ಕನ್ನಡ ಜಿಲ್ಲಾ ಸಮಿತಿ ಹಾಗೂ ಹಳಿಯಾಳ ತಾಲೂಕಾ ಸಮಿತಿಯ ಸಹಯೋಗದಲ್ಲಿ ಹಳಿಯಾಳ ಪಟ್ಟಣದ ಬಾಬು ಜಗಜೀವನ್ ರಾಮ್ ಭವನದಲ್ಲಿ ಭಾನುವಾರ ಬೆಳಿಗ್ಗೆ 11:30 ಸುಮಾರಿಗೆ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವಾರ್ಷಿಕ ಮಹಾಸಭೆ ಜರುಗಿತು. ಸಭೆಯನ್ನು ಶಾಸಕ ಆರ್.ವಿ ದೇಶಪಾಂಡೆ ಅವರು ಉದ್ಘಾಟಿಸಿ ಶುಭ ಹಾರೈಸಿದರು.ನಂತರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರ ಜೊತೆ ವಿದ್ಯುತ್ ಗುತ್ತಿಗೆದಾರರ ಹಿತಾಸಕ್ತಿ, ಸುರಕ್ಷತಾ ಮಾನದಂಡಗಳ ಪಾಲನೆ,ನೂತನ ತಂತ್ರಜ್ಞಾನಗಳ ಅಳವಡಿಕೆ ಮೂಲಕ ವೃತ್ತಿಪರತೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಆರ್.ವಿ.ದೇಶಪಾಂಡೆಯವರು ಚರ್ಚೆ ನಡೆಸಿದರು.