ಹುಬ್ಬಳ್ಳಿ: ಹಿರಿಯ ನಾಗರಿಕರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿ ಡಿ. ೧೬ ರಂದು ಬೆಳಗಾವಿಯ ಸುವರ್ಣಸೌಧದ ಬಳಿ ಹಿರಿಯ ನಾಗರಿಕರ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಹಿರಿಯ ನಾಗರಿಕರ ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಬಿ.ಎ.ಪಾಟೀಲ್ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಹಿರಿಯ ನಾಗರಿಕರು ರಾಷ್ಟ್ರದ ಸಂಪತ್ತು ಎಂದು ಘೋಷಣೆ ಮಾಡಬೇಕು, ಆರ್ಥಿಕವಾಗಿ ದುರ್ಬಲರಾದ ಹಿರಿಯ ನಾಗರಿಕರಿಗೆ ಮಾಸಿಕ ೧೦ ಸಾವಿರ ವೃದ್ಧಾಪ್ಯ ವೇತನ ನೀಡಬೇಕು, ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಸಚಿವಾಲಯ, ಸಚಿವರು ಹಾಗೂ ಬಜೆಟ್ ಮಂಡನೆಯಾಗಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.