ಬೆಂಗಳೂರು ಅರಮನೆ ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ‘ಸುವರ್ಣ ಮಹೋತ್ಸವ’, ಮಕ್ಕಳ ದಿನಾಚರಣೆ ಹಾಗೂ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಇಲಾಖೆಯ ಮಹತ್ವಾಕಾಂಕ್ಷಿ ಕಲ್ಯಾಣ ಯೋಜನೆಗಳು ಹಾಗೂ ‘ಗೃಹಲಕ್ಷ್ಮಿ ಸಹಕಾರ’ ಅನ್ವಯಿಕೆಯನ್ನು ಅವರು ಲೋಕಾರ್ಪಣೆ ಮಾಡಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರು ಲಕ್ಷ್ಮಿ ಹೆಬ್ಬಾಳ್ಕರ್, ಸಿ. ಮಹಾದೇವಪ್ಪ, ಕೆ.ಎಚ್. ಮುನಿಯಪ್ಪ, ಈಶ್ವರ ಖಂಡ್ರೆ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.