ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸುವುದಕ್ಕೆ ಸಂಬAಧಿಸಿದಂತೆ ಚರ್ಚಿಸಲು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನವೆಂಬರ್ 27ರಂದು ರಾಜಕೀಯ ಪಕ್ಷಗಳ ಪ್ರತಿನಿಗಳೊಂದಿಗೆ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಭಾರತ ಚುನಾವಣಾ ಆಯೋಗವು ಹೊರಡಿಸಿದ ವೇಳಾಪಟ್ಟಿಗೆ ಅನುಗುಣವಾಗಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ ಎಂದು ತಿಳಿಸಿದರು.