7 ಕೋಟಿ ರೂಪಾಯಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ತಮಿಳುನಾಡಿನ ವೇಲೂರು ಬಳಿ ಬಂಧಿಸಲಾಗಿದೆ. ಕಾಡುಗೊಂಡನಹಳ್ಳಿ ನಿವಾಸಿ ಈ ಆರೋಪಿಯನ್ನು ಶನಿವಾರ ಪೊಲೀಸರು ಸಿದ್ದಾಪುರ ಠಾಣೆಗೆ ಕರೆತಂದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈತ ಹಣದ ಬಾಕ್ಸ್ ತೆರೆದು ಚೀಲದಲ್ಲಿ ತುಂಬಿ ವ್ಯಾಗನ್ಆರ್ ಕಾರಿನಲ್ಲಿ ಪರಾರಿಯಾಗಿದ್ದ. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಈ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.