ಹುಬ್ಬಳ್ಳಿ: ಮೂರು ದಿನಗಳ ಹಿಂದೆ ಹಳೇ ದ್ವೇಷದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಮಂಟೂರ ರೋಡ್ ಬ್ಯಾಳಿ ಪ್ಲಾಟ್ ಬಳಿ, ಮಲ್ಲಿಕಜಾನ್ ಎಂಬಾತನನ್ನು ಸೆಟ್ಲಮೆಂಟ್ ಗ್ಯಾಂಗ್ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬೆಂಡಿಗೇರಿ ಪೊಲೀಸರು ಬಂಧಿಸಿದ್ದರು. ನಂತರ ಉಳಿದ ಆರೋಪಿಗಳನ್ನು ತೋರಿಸಲು ಕರೆದೊಯ್ದಿದಾಗ, ಆರೋಪಿಗಳು ಪೊಲೀಸರ ಮೇಲೆ ಕಲ್ಲೆಸೆದು ತಪ್ಪಿಸಿಕೊಳ್ಳಲುಯತ್ನಿಸುತ್ತಿದ್ದರು. ಆಗ ಬೆಂಡಿಗೇರಿ ಠಾಣೆ ಇನ್ಸ್ಪೆಕ್ಟರ್ ಎಸ್.ಆರ್. ನಾಯ್ಕ ಮತ್ತು ಅವರ ತಂಡ ಫೈರಿಂಗ್ ಮಾಡಿ ಬಂಧಿಸಿದ್ದಾರೆ ಎಂದು ಹುಧಾ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ತಿಳಿಸಿದರು..