ದೇವದುರ್ಗ ತಾಲೂಕಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಕೃಷ್ಣಾ ನದಿಯಿಂದ ಮರಳು ಕದಿಯಲಾಗುತ್ತಿದೆ. ಶನಿವಾರ 8 ಗಂಟೆ 30 ನಿಮಿಷಕ್ಕೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ. ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಅದೆಷ್ಟೇ ಕ್ರಮ ಕೈಗೊಂಡರೂ ಇವರ ಕಣ್ತಪ್ಪಿಸಿ ಅಕ್ರಮ ಮರಳು ಸಾಗಾಟ ಮಾಡಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಯಥೇಚ್ಛವಾಗಿ ನಡೆಯುತ್ತಿದೆ. ರಾತ್ರಿ ಅಕ್ರಮವಾಗಿ ನದಿಯಿಂದ ಟ್ರ್ಯಾಕ್ಟರ್ ಮುಖಾಂತರ ಮರಳು ಕದ್ದು ಒಂದೆಡೆ ಸಂಗ್ರಹ ಮಾಡಲಾಗುತ್ತದೆ. ತದನಂತರ ಬೆಳಗಿನ ಜಾವ ಲಾರಿಗಳ ಮುಖಾಂತರ ನಕಲಿ ಪರವಾನಿಗೆ ಪತ್ರ ಹಿಡಿದು ಹೊರ ಜಿಲ್ಲೆಗಳಿಗೆ ಸಾಗಿಸಲಾಗುತ್ತಿದೆ.