ಮೊಳಕಾಲ್ಮೂರು:-ಪಟ್ಟಣ ಪಂಚಾಯಿತಿ ಕಚೇರಿಗೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ಶಾಸಕ ಎನ್ ವೈ ಗೋಪಾಲಕೃಷ್ಣ ಭೇಟಿ ನೀಡಿದರು. ಭೇಟಿ ವೇಳೆ ಪಟ್ಟಣ ಪಂಚಾಯತಿ ಆಡಳಿತಾಧಿಕಾರಿಗಳಾದ ಜಗದೀಶ್ ಹಾಗೂ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಲಿಂಗರಾಜ್ ಜೊತೆ ಪಟ್ಟಣದ ಸಮಸ್ಯೆಗಳ ಕುರಿತಂತೆ ಆಲಿಸಿದರು. ಪಟ್ಟಣದ ವ್ಯಾಪ್ತಿಯಲ್ಲಿ ಬಡಜನರು ಹೆಚ್ಚು ಇದ್ದು ಆಶ್ರಯ ಯೋಜನೆ ಅಡಿಯಲ್ಲಿ ವಸತಿ ಸೌಲಭ್ಯ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಮೊದಲ ಆದ್ಯತೆ ನೀಡಲಾಗುವುದು, ಮುಂಬರಲಿರುವ ಬೇಸಿಗೆಯಲ್ಲಿ ಯಾವುದೇ ರೀತಿಯಾಗಿ ನೀರಿಗೆ ಅಭಾವ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.