ಸಿದ್ಧಾಪುರ: ಅವರಗುಪ್ಪ ಮಾರಿಕಾಂಬಾ ಜಾತ್ರಾ ಸಿದ್ಧತೆ ಪರಿಶೀಲಿಸಿದ ಶಾಸಕ ಭೀಮಣ್ಣ ನಾಯ್ಕ
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಶನಿವಾರ ಸಂಜೆ 5.30 ಗಂಟೆಗೆ ಸಿದ್ದಾಪುರ ತಾಲೂಕಿನ ಅವರಗುಪ್ಪಾ ಮಾರಿಕಾಂಬಾ ಜಾತ್ರಾ ಸಿದ್ದತೆಯನ್ನು ಪರಿಶೀಲಿಸಿ ಕುಡಿಯುವ ನೀರು, ವಿದ್ಯುತ್ ಹಾಗೂ ಸೂಕ್ತ ಭದ್ರತೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಎಪ್ರಿಲ್ 1 ರಿಂದ ಅವರಗುಪ್ಪಾದ ಶ್ರೀ ಮಾರಿಕಾಂಬಾ ಜಾತ್ರೆ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.