ಹುಬ್ಬಳ್ಳಿ: ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ತನ್ನ ಕುಟುಂಬವನ್ನು ಬಿಟ್ಟು ದುಬೈಗೆಂದು ದುಡಿಯಲು ಹೋಗಿದ್ದರು. ಸ್ವಲ್ಪ ದಿನಗಳ ಮಟ್ಟಿಗೆ ರಜೆ ಹಾಕಿ ತನ್ನ ಹುಟ್ಟೂರು ಅಂದ್ರೆ ಹುಬ್ಬಳ್ಳಿಗೆ ಬರುತ್ತಿದ್ದರು. ಬರುವಾಗ ತನ್ನ ಸ್ನೇಹಿತರ ಜೊತೆ ಸೌದಿ ಅರೇಬಿಯಾದ ಮೆಕ್ಕಾಗೆ ಹೋಗುವಾಗ, ಬಸ್ ನಲ್ಲಿದ್ದ 42 ಜನರು ಸಜೀವ ದಹನವಾಗಿ ದಾರುಣ ಮರಣ ಹೊಂದಿದ್ದಾರೆ. ಅದರಲ್ಲಿ ಹುಬ್ಬಳ್ಳಿಯ ಗಣೇಶಪೇಟಗ್ ನಿವಾಸಿ ಅಬ್ದುಲ್ ಗನಿ ಶಿರಹಟ್ಟಿ ಕೂಡ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯಲ್ಲಿ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.