ಕಾರ್ಮಿಕರಿಗೆ ಸಂವಿಧಾನ ಬದ್ದ 42 ಸಾವಿರ ವೇತನ ಸೇರಿ ಗುತ್ತೆಗೆ ಕಾರ್ಮಿಕ ಪದ್ಧತಿ ರದ್ದು ಪಡಿಸಬೇಕು ಎಂದು ಆಗ್ರಹಿಸಿ ದಿ.27 ರಂದು ಬೆಂಗಳೂರಿನ ಫ್ರಿಡಂ ಪಾರ್ಕ್ ನಲ್ಲಿ ರಾಜ್ಯ ಮಟ್ಟದ ಪ್ರತಿಭಟನೆ ಹಮ್ಮಿ ಕೊಳ್ಳಲಾಗಿದೆ ಎಂದು ಶನಿವಾರ 10 ಗಂಟೆ 30 ನಿಮಿಷಕ್ಕೆ ಎಐಸಿಸಿಟಿ ಯು ರಾಜ್ಯ ಪ್ರದಾನ ಕಾರ್ಯದರ್ಶಿ ಮೈತ್ರಿ ಕೃಷ್ಣ ಅವರು ಹೇಳಿದರು. ನಗರದ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪ್ರತಿ ಐದು ವರ್ಷಕ್ಕೊಮ್ಮೆ ಕಾರ್ಮಿಕರಿಗೆ ವೇತನ ಹೆಚ್ಚಳ ಮಾಡಬೇಕು ಎಂಬ ನಿಯಮವಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರಕಾರ ಕಾರ್ಮಿಕರಿಗೆ ಗುತ್ತೆಗೆ ಪದ್ಧತಿ ಮೂಲಕ ಮೂಲಭೂತ ಸೌಕರ್ಯದಿಂದ ವಂಚನೆ ಮಾಡಲಾಗುತ್ತಿದೆ ಎಂದರು.