ನಗರದಲ್ಲಿ ಶನಿವಾರ ಸಂಜೆ 7.30ರ ಸುಮಾರು ಮಾಧ್ಯಮ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಅವರು ರಾಜ್ಯದಲ್ಲಿಯೇ ಅತಿ ದೊಡ್ಡ ಶಿರಸಿ ಮಾರಿಕಾಂಬಾ ಜಾತ್ರೆಗೆ ಇನ್ನೂ ಜಾತ್ರಾ ಅನುದಾನ ಮಂಜೂರಿಯಾಗಿಲ್ಲ, ಈಗಾಗಲೇ ಪತ್ರಿಕಾಗೋಷ್ಠಿ ನಡೆಸಿ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿದರೂ, ಕೂಡ ಶಾಸಕರು ನಿರ್ಲಕ್ಷ್ಯ ತೋರಿದ್ದಾರೆ. ಮೂಲಭೂತ ಸೌಕರ್ಯ ಅಂದರೆ ಕೇವಲ ರಸ್ತೆಯಲ್ಲ, ಬರುವ ಲಕ್ಷಾಂತರ ಭಕ್ತರಿಗೆ ಶೌಚಾಲಯ, ಸ್ನಾನಗೃಹ, ರಾತ್ರಿ ಮಲಗುವ ವ್ಯವಸ್ಥೆ, ಬೆಳಿಗ್ಗೆ ತಿಂಡಿ ವ್ಯವಸ್ಥೆ ಒಳಗೊಂಡಿದೆ.