ನೌಕಾನೆಲೆಯ ಅಭಿವೃದ್ಧಿಗಾಗಿ ತಮ್ಮ ಫಲವತ್ತಾದ ಭೂಮಿಯನ್ನು ತ್ಯಾಗ ಮಾಡಿದ ಸ್ಥಳೀಯ ನಿರಾಶ್ರಿತರಿಗೆ ಹಾಗೂ ಮೀನುಗಾರರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಮೀನುಗಾರ ಮುಖಂಡ ಗಣಪತಿ ಮಾಂತ್ರೆ ಆರೋಪಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಶನಿವಾರ ಮಧ್ಯಾಹ್ನ 2ಕ್ಕೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೌಕಾನೆಲೆಯಿಂದ ಸ್ಥಳೀಯರಿಗೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ ಪ್ರಸ್ತುತ ಪರಿಸ್ಥಿತಿ ತದ್ವಿರುದ್ಧವಾಗಿದ್ದು, ನೌಕಾನೆಲೆಯಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಲ್ಲಿ ಉದ್ದೇಶಪೂರ್ವಕ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದರು.