ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚುತ್ತಿದ್ದು, ಮಂಗಳವಾರ ಹೆಗಡೆ ನಗರದ ಮುಖ್ಯ ರಸ್ತೆಯಲ್ಲಿ ಕ್ಯಾಬ್ಗೆ ಬಸ್ ತಗುಲಿದ ಕಾರಣಕ್ಕೆ ಕ್ಯಾಬ್ ಚಾಲಕನೊಬ್ಬ ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಶಿವಾಜಿನಗರದಿಂದ ಯಲಹಂಕ ಕಡೆಗೆ ತೆರಳುತ್ತಿದ್ದ ಬಸ್ಗೆ ಕ್ಯಾಬ್ ತಗುಲಿದ್ದೇ ಈ ಗಲಾಟೆಗೆ ಕಾರಣ ಎನ್ನಲಾಗಿದೆ. ಕ್ಯಾಬ್ ಚಾಲಕ ನರಸಿಂಹಯ್ಯ, ಬಿಎಂಟಿಸಿ ಚಾಲಕ ನಾಗೇಶ್ ಹಾಗೂ ಕಂಡಕ್ಟರ್ ಕೆಂಚಪ್ಪ ಮೇಲೆ ಹಲ್ಲೆ ನಡೆಸಿದ್ದಾನೆ. ಪ್ರಯಾಣಿಕರು ಈ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.