ಹುಬ್ಬಳ್ಳಿ:ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹುಬ್ಬಳ್ಳಿ ಮಹಾನಗರದಿಂದ ನವೆಂಬರ್ 9 ರಂದು ಬೃಹತ್ ರಕ್ತದಾನ ಶಿಬಿರವನ್ನು ರಾಷ್ಟ್ರೋತ್ಥಾನ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಇಲ್ಲಿನ ಭವಾನಿ ನಗರದ ರಾಯರಮಠದ ಶ್ರೀಸುಜಿಯೀಂದ್ರ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಉತ್ತರ ಪ್ರಾಂತ ಉಪಾಧ್ಯಕ್ಷರಾದ ಗೋವರ್ಧನರಾವ್ ಹೇಳಿದರು.ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 41 ವರ್ಷಗಳಿಂದ ಭಜರಂಗದಳವು ಸೇವಾ, ಸುರಕ್ಷಾ, ಸಂಸ್ಕಾರದೊಂದಿಗೆ ಕಾರ್ಯ ಮಾಡುತ್ತಿದೆ. ಇದಲ್ಲದೇ ಯುವಕರಲ್ಲಿ ದೇಶಭಕ್ತಿ ಮೂಡಿಸುವ ಜೊತೆಗೆ ಮತಾಂತರ, ಲವ್ ಜಿಹಾದ್, ಗೋ ರಕ್ಷಣೆ ವಿಷಯವಾಗಿ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದೆ. ಇದೀಗ ಕೇಂದ್ರ ಸರ್ಕಾರ ಆರೋಗ್ಯದ ಬಗ್ಗೆ ಯುವಕ-ಯುವತಿಯರಲ್ಲಿ ಜಾಗೃತಿ ಮೂಡಿಸಲು ನಶೆಮುಕ್ತ ಭಾರತ ಕಾರ್