ಜಗಳೂರು: ಮಾ.14ರಂದು ಕೊಡದಗುಡ್ಡ ವೀರಭದ್ರೇಶ್ವರ ಸ್ವಾಮಿಯ ಕರಿಗಲ್ಲು ಸ್ಥಾಪನೆ: ಕೊಡದಗುಡ್ಡದ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ
ಮಾ.14ರಂದು ಕೊಡದಗುಡ್ಡ ವೀರಭದ್ರೇಶ್ವರ ಸ್ವಾಮಿಯ ಕರಿಗಲ್ಲು ಸ್ಥಾಪನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಡದಗುಡ್ಡದ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ ಹೇಳಿದರು. ಅವರು ತಾಲ್ಲೂಕಿನ ಕೊಡದಗುಡ್ಡ ವೀರಭದ್ರೇಶ್ವರ ಸ್ವಾಮಿಯ ಕರಿಗಲ್ಲು ಸ್ಥಾಪನೆ ಹಿನ್ನೆಲೆ ಕೊಡಗು ಗುಡ್ಡ ವೀರಭದ್ರೇಶ್ವರ ಸ್ವಾಮಿಯ ಸಭಾಂಗಣದಲ್ಲಿ ವೀರಭದ್ರೇಶ್ವರ ಟ್ರಸ್ಟ್ ವತಿಯಿಂದ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೊಡದಗುಡ್ಡ ವೀರಭದ್ರೇಶ್ವರ ದೇಗುಲ ಆವರಣದಲ್ಲಿ ಮಾರ್ಚ್ 14ರಂದು ವಸತಿಗೃಹ ಉದ್ಘಾಟನೆ, ಕರಿಕಲ್ಲು ಸ್ಥಾಪನೆ, ಕಲ್ಯಾಣ ಮಂಟಪ ಶಂಕು ಸ್ಥಾಪನೆ, ಅಡಪಲ್ಲಕ್ಕಿ ಮಹೋತ್ಸವ ಹಾಗೂ ಧಾರ್ಮಿಕ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.