ರೈತರಿಗೆ ರಸಗೊಬ್ಬರದ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಸುರ್ಪುರ ನಗರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮುಂದೆ ಶುಕ್ರವಾರ ಮಧ್ಯಾನ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಸಂಘದ ಜಿಲ್ಲ ಕಾರ್ಯಧ್ಯಕ್ಷ ರವಿ ನಾಯಕ ಭೈರಿಮಡ್ಡಿ ಮಾತನಾಡಿ, ರೈತರಿಗೆ ರಸಗೊಬ್ಬರ ಅಂಗಡಿಯವರು ಹೆಚ್ಚಿನ ದರಕ್ಕೆ ರಸಗೊಬ್ಬರ ನೀಡಿ ಮೋಸ ಮಾಡುತ್ತಿದ್ದರೆ ಹಾಗೂ ರಸಗೊಬ್ಬರ ಇದ್ದರೂ ರೈತರಿಗೆ ಕೊಡುತ್ತಿಲ್ಲ ಅಂತವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಂಘದ ತಾಲೂಕ ಅಧ್ಯಕ್ಷ ಗೋಪಾಲ ನಾಯಕ ಸತ್ಯಂಪೇಟೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.