ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿ, ಸಾವನ್ನಪ್ಪಿದ್ದು, ವೈದ್ಯ ನಿರ್ಲಕ್ಷ ಆರೋಪ ಕೇಳಿಬಂದಿದೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ತಿಪ್ಪೇಸ್ವಾಮಿ ತೀವೃ ಅಸ್ವಸ್ಥತೆ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ವೈದ್ಯರು ಚಿಕಿತ್ಸೆ ನೀಡಲು ನಿರ್ಲಕ್ಷ ಮಾಡಿದ್ರು ಎನ್ನುವ ಆರೋಪ ಕುಟುಂಬಸ್ಥರದ್ದು. ಮುಂಜಾನೆ ಆಸ್ಪತ್ರೆಗೆ ದಾಖಲಾಗಿದ್ದ, ತಿಪ್ಪೇಸ್ವಾಮಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿದ್ರೆ ಆತ ಬದುಕುತ್ತಿದ್ದ. ಆದ್ರೆ ವೈದ್ಯರ ನಿರ್ಲಕ್ಷದಿಂದಲೇ ಆತ ಸಾವನ್ನಪ್ಪಿದ್ದಾನೆ ಅಂತಾ ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.