ರಾಮನಗರ: ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಸ್ಥ ನಾರಿ – ಸಶಕ್ತ ಪರಿವಾರ ಅಭಿಯಾನಕ್ಕೆ ಸಂಸದ ಡಾ ಮಂಜುನಾಥ್ ಚಾಲನೆ
ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಸ್ಥ ನಾರಿ – ಸಶಕ್ತ ಪರಿವಾರ ಅಭಿಯಾನಕ್ಕೆ ಸಂಸದ ಡಾ ಮಂಜುನಾಥ್ ಬುಧವಾರ ಚಾಲನೆ ನೀಡಿದರು.ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ಜನ್ಮದಿನದ ಅಂಗವಾಗಿ “ಸ್ವಸ್ಥ ನಾರಿ – ಸಶಕ್ತ ಪರಿವಾರ ಆರೋಗ್ಯ” ಅಭಿಯಾನ ಹಾಗೂ ಉಚಿತ ಆರೋಗ್ಯ ಶಿಬಿರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಆರೋಗ್ಯವಂತ ತಾಯಿ ಕುಟುಂಬವನ್ನು ಬಲಪಡಿಸುತ್ತಾಳೆ, ಆರೋಗ್ಯವಂತ ಕುಟುಂಬ ಸಮಾಜವನ್ನು ಸಶಕ್ತಗೊಳಿಸುತ್ತದೆ ಎಂದರು.