ರಾಮನಗರ: ನಗರದ ಬೆಸ್ಕಾಂ ಇಲಾಖೆ ಕಚೇರಿ ಎದರಿನ ರಸ್ತೆಯಲ್ಲಿ ಶವ ಇಟ್ಟು ಪ್ರತಿಭಟನೆ
ಬೆಸ್ಕಾಂ ಇಲಾಖೆಯ ಮುಂದೆ ಶವವಿಟ್ಟು ಕುಟುಂಬಸ್ಥರಿಂದ ಪ್ರತಿಭಟನೆ ನಡೆಸಲಾಯಿತು. ಕಳೆದ 6 ತಿಂಗಳ ಹಿಂದೆ ಕೆಲಸ ಮಾಡುವಾಗ ಬಿದ್ದು ಸೊಂಟ ಮುರಿದುಕೊಂಡಿದ್ದ ವ್ಯಕ್ತಿ ಸೂರ್ಯ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದ. ಬೆಸ್ಕಾಂ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡ್ತಿದ್ದ ಮೃತ ವ್ಯಕ್ತಿ ಕಳೆದ 6 ತಿಂಗಳಿಂದೇ ಕೆಂಪನಹಳ್ಳಿ ಗ್ರಾಮದಲ್ಲಿ ಕೆಲಸ ಮಾಡ್ತಿದ್ದ ವೇಳೆ ಕಂಬದ ಮೇಲಿಂದ ಬಿದ್ದು ಸೊಂಟ ಮುರಿದಿತ್ತು. ಹಾಗೂ ಸೂಕ್ತ ಪರಿಹಾರ ನೀಡುವಂತೆ ಬುಧವಾರ ಶವ ಇಟ್ಟು ಪ್ರತಿಭಟನೆ ನಡೆಸಲಾಯಿತು.