ಗೌರಿಬಿದನೂರು: ಹಂಪಸಂದ್ರ ಗ್ರಾಮದಲ್ಲಿ 144 ಸೆಕ್ಷನ್ ಜಾರಿ
ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಇಂದು ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಎರಡು ಗುಂಪುಗಳನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆದಿದ್ದು 24 ಗಂಟೆಗಳ ಕಾಲ 144 ಸೆಕ್ಷನ್ ಜಾರಿಯಾಗಿದೆ. ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಹಿನ್ನಲೇ ರಾತ್ರೋರಾತ್ರಿ ಅಂಬೇಡ್ಕರ್ ಪುತ್ಥಳಿ ನಿರ್ಮಾಣವಾಗಿದ್ದು ಅದೇ ಸ್ಥಳದಲ್ಲೇ ವಾಲ್ಮೀಕಿ ಜಯಂತಿ ನಿರ್ಮಾಣ ಮಾಡಬೇಕೆಂದು ವಾಗ್ವಾದ ಶುರುವಾಗಿದೆ. ಇನ್ನೂ ಗಲಾಟೆ ಹತೋಟೆಗೆ ಬಾರದ ಹಿನ್ನಲೇ ಸಮಸ್ಯೆಯನ್ನು ಹತೋಟಿಗೆ ತರಲು ಲಾಠಿ ಚಾರ್ಜ್ ನಡೆಸಿ ಸಮಸ್ಯೆಯನ್ನು ಹತೋಟಿಗೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಕುಶಾಲ್ ಚೌಕ್ಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಗ್ರಾಮದಲ್ಲಿ 24 ಗಂಟೆಗಳ ಕಾಲ 144 ಸೆಕ್ಷನ್ ಜಾರಿಮಾಡಲಾಗಿದೆ ಎಂದು ತಿಳಿಸಿದ್ದಾರೆ.