ಬೆಂಗಳೂರು ಉತ್ತರ: ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ; ಇದರ ಹೊರತು ಬೇರೆ ಮಾಹಿತಿ ತಿಳಿದಿಲ್ಲ: ನಗರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್
ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ ನೀಡಿದ್ದಾರೆ. ನನಗೆ ಬೇರೆ ಯಾವುದೇ ವಿಚಾರ ಗೊತ್ತಿಲ್ಲ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ಸೋಮವಾರ ರಾತ್ರಿ 7:30 ರ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಇದರಿಂದ ನನಗೂ ನೋವಾಗಿದೆ. ರಾಜಣ್ಣ ಅವರು ನನ್ನ ಒಳ್ಳೆಯ ಸ್ನೇಹಿತರು, ಆಪ್ತರು. ಕಳೆದ 25 ವರ್ಷಗಳಿಂದ ಜೊತೆಯಲ್ಲಿ ರಾಜಕಾರಣ ಮಾಡಿಕೊಂಡು ಬಂದಿದ್ದೇವೆ" ಎಂದು ಹೇಳಿದರು. ಪಕ್ಷದಿಂದ ಉಚ್ಚಾಟಿಸಬೇಕು ಎಂದು ಹೈಕಮಾಂಡ್ ನಿಂದ ಸೂಚನೆ ಏನಾದರೂ ಬಂದಿತ್ತೇ