ನಗರದಲ್ಲಿ ವಾಹನ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸ್ ಇಲಾಖೆಯು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದು ರಾಯಚೂರು ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್ಐ ಸಣ್ಣ ಈರೇಶ್ ತಿಳಿಸಿದ್ದಾರೆ. ಬುಧವಾರ 10 ಗಂಟೆಗೆ ಮಾತನಾಡುತ್ತಾ, ನಗರದಲ್ಲಿ ದ್ವಿ ಚಕ್ರ ವಾಹನ ಚಲಾಯಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಕಾನೂನು ಹೇಳುತ್ತದೆ. ಈ ನಿಯಮವನ್ನು ಪಾಲಿಸದೇ ವಾಹನ ಚಲಾಯಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.