ಕೋಲಾರ: ಗೌರಿ ಗಣೇಶ, ಈದ್ ಮಿಲಾದ್ ಹಬ್ಬ ಸೌಹಾರ್ದವಾಗಿ ಆಚರಿಸಿ: ನಗರದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ
Kolar, Kolar | Aug 18, 2025 ಜಿಲ್ಲೆಯಲ್ಲಿ ಗೌರಿ–ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು. ಅರ್ಥಪೂರ್ಣ ಆಚರಣೆಗೆ ಪ್ರತಿಯೊಬ್ಬರೂ ನೆರವಾಗಬೇಕು’ ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಹೇಳಿದರು. ಸೋಮವಾರ ಸಂಜೆ 4.30ರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಶಾಂತಿ ಪಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪಿಒಪಿ ಹಾಗೂ ರಾಸಾಯನಿಕ ಮಿಶ್ರಿತ ಬಣ್ಣಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು.