ನಾಳೆಯ ಹವಾಮಾನ: ಕರಾವಳಿಗೆ ವರುಣಾಘಾತ, 27 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕರಾವಳಿ ಭಾಗದಲ್ಲಿ ನಾಳೆಯೂ ವರುಣ ಅಬ್ಬರಿಸಲಿದ್ದು, 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 3 ಉಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗದ 27 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಗುರುವಾರ ಸಂಜೆ 7 ಗಂಟೆಯಲ್ಲಿ ತಿಳಿಸಿದೆ.