ಬೆಂಗಳೂರು ಉತ್ತರ: ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಅವರಿಂದ ಮಲ್ಲೇಶ್ವರಂ ಕಡ್ಲೆಕಾಯಿ ಪರಿಷೆ ಉದ್ಘಾಟನೆ
ರವಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾಡು ಮಲ್ಲೇಶ್ವರ ಗೆಳೆಯರ ಬಳಗದ ವತಿಯಿಂದ ಆಯೋಜಿಸಲಾದ “ಮಲ್ಲೇಶ್ವರಂ ಕಡ್ಲೆಕಾಯಿ ಪರಿಷೆ”ಯ 9ನೇ ವರ್ಷದ ಕಾರ್ಯಕ್ರಮವನ್ನು ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಅವರು ಉದ್ಘಾಟನೆ ಮಾಡಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ. ಹರಿಪ್ರಸಾದ್, ಕಾಡು ಮಲ್ಲೇಶ್ವರ ಗೆಳೆಯರ ಬಳಗದ ಅಧ್ಯಕ್ಷರಾದ ಶ್ರೀ ಬಿ.ಕೆ. ಶಿವರಾಮ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಶರವಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಶ್ರೀ ರಕ್ಷಿತ್ ಶಿವರಾಮ್, ಬಿಎಂಟಿಸಿ ಅಧ್ಯಕ್ಷರಾದ ಶ್ರೀ ಆರಾಧ್ಯ ಹಾಗೂ ಡಾ. ಲೀಲಾ ಸಂಪಿಗೆ ನಾಡಗೌಡ ಮುಂತಾದ ಗಣ್ಯರು ಉಪಸ್ಥಿತರಿದ್ದರು.