ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹಾಲಿ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಗಳಾಗಲಿ ಎಂದು ಹರಕೆ ಹೊತ್ತು ದೇವಾಲಯದ ಮುಂಭಾಗದಲ್ಲಿ ಸಾವಿರದ ಒಂದು ತೆಂಗಿನಕಾಯಿಗಳನ್ನು ಈಡುಗಾಯಿ ಹೊಡೆಯುವುದರ ಮೂಲಕ ಹರಕೆ ಹೊತ್ತುಕೊಂಡರು ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಆದಷ್ಟು ಬೇಗ ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿ ಸಿಎಂ ಆಗಲು ಅನುವು ಮಾಡಿಕೊಡಬೇಕು ಎಂದು ಯುವ ಕಾಂಗ್ರೆಸ್ ಮುಖಂಡರು ಘಾಟಿ ಸುಬ್ರಹ್ಮಣ್ಯದಲ್ಲಿ ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು