ಶುಕ್ರವಾರ ಮಧ್ಯಾಹ್ನ 12ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಜನರನ್ನು ನಂಬಿಸಿ ಗರಿಷ್ಠ ಬಹುಮತ ಪಡೆದು ಆಡಳಿತಕ್ಕೆ ಬಂದ ಕಾಂಗ್ರೆಸ್ ಪಕ್ಷ ಜನರಿಗೆ ದ್ರೋಹ, ಅನ್ಯಾಯ, ಭ್ರಷ್ಟಾಚಾರವನ್ನೇ ಮಾಡುತ್ತಾ ಬಂದಿದೆ. ಪ್ರಾರಂಭದ ದಿನದಿಂದ ನೂರಾರು ಹಗರಣ ಮಾಡಿದೆ. ಒಂದೇ ಒಂದು ಒಳ್ಳೆಯ ಕೆಲಸ ಮಾಡಿಲ್ಲ. ಅದೇ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆಗೆ ಹೊಡೆದಂತೆ ಸುಳ್ಳು ಹೇಳಲು ಮೈಸೂರಿನಲ್ಲಿ ಸಮಾವೇಶ ಮಾಡುತ್ತಿದ್ದಾರೆ. ಇದರಿಂದ ಆತ್ಮಸಾಕ್ಷಿ ಎನ್ನುವುದು ಕಾಂಗ್ರೆಸ್ಸಿಗರಿಗೆ ಇಲ್ಲ ಎನ್ನುವುದು ಸಾಬೀತಾಗುತ್ತದೆ ಎಂದು ಟೀಕಿಸಿದರು.