ಅಧಿಕಾರಿಗಳು ಸಮಯ ಪಾಲನೆ ಮಾಡುವುದು ಕಡ್ಡಾಯ ಶಾಸಕ ಕೆ ವೈ ನಂಜೇಗೌಡ ಮಾಲೂರು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಸ್ಪಷ್ಟ ದಿಕ್ಕು ನೀಡುವ ಉದ್ದೇಶದಿಂದ ಮಾಲೂರು ನಗರದ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯಲ್ಲಿ ಮಾಲೂರು ತಾಲ್ಲೂಕಿನ ಶಾಸಕರು ಹಾಗೂ ಕೋಮುಲ್ ಅಧ್ಯಕ್ಷರಾದ ಕೆ. ವೈ. ನಂಜೇಗೌಡರವರು ಭಾಗವಹಿಸಿದ್ದರು ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ವಿಳಂಬ ಮತ್ತು ನಿರ್ಲಕ್ಷ್ಯಕ್ಕೆ ತಡೆ ಹಾಕುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು, ಅಭಿವೃದ್ಧಿ ಕಾರ್ಯಗಳಲ್ಲಿ ಗುಣಮಟ್ಟ, ಪಾರದರ್ಶಕತೆ ಹಾಗೂ ಸಮಯಪಾಲನೆ ಕಡ್ಡಾಯ ಎಂದು ಶಾಸಕರು ಎಚ್ಚರಿಸಿದರು