ದಾಂಡೇಲಿ : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ-4ರ ಯೋಜನೆಯಡಿ ದಾಂಡೇಲಿ ನಗರಸಭೆಯ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳ ಹಾಗೂ ಇತರ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ ಮತ್ತು ಎಲ್ಇಡಿ ಪರದೆ ಲೋಕಾರ್ಪಣೆಯು ಮಂಗಳವಾರ ಸಂಜೆ 6:30 ಗಂಟೆ ಸುಮಾರಿಗೆ ನಗರಸಭೆಯ ಆವರಣದಲ್ಲಿ ಜರುಗಿತು. ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ಹಾಗೂ ಇತರ ಸಾಮಗ್ರಿಗಳನ್ನು ವಿತರಿಸಿ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ. ದೇಶಪಾಂಡೆ ಅವರು ಮಾತನಾಡಿದರು.