ಚಳ್ಳಕೆರೆ : ನಮ್ಮನ್ನ ಹಾಳುವ ಸರ್ಕಾರಗಳು ರೈತರಿಗೆ ವರದಾನ ಆಗಬೇಕೆ ಹೊರತು ಮಾರಕವಾಗಬಾರದು, ರೈತರು ಈಗಾಗಲೇ ಬೆಳೆ ಹಾನಿ, ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಆದರೆ ಬೆಳೆದ ಬೆಳೆಗೆ ಸರಿಯಾದ ಪ್ರಮಾಣದಲ್ಲಿ ಬೆಲೆ ಸಿಗದೆ ರೈತ ವಿಷಕುಡಿಯುವಂತ ಪರಿಸ್ಥಿತಿಯಲ್ಲಿ ಇದ್ದಾನೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಹೇಳಿದರು. ಅವರು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರೈತರು ಬೆಳೆದ ಮೆಕ್ಕೆಜೋಳಕ್ಕೆ ಸರಿಯಾದ ಬೆಲೆ ಸಿಗಲು ಸರ್ಕಾರದ ವತಿಯಿಂದ ಖರೀದಿ ಕೇಂದ್ರ ತೆರೆಯಲು ಈಗಾಗಲೇ ಹಲವಾರು ಬಾರಿ ಅಧಿಕಾರಿಗಳ ಗಮನ ಸೆಳೆಯಲಾಗಿದೆ.