ಹೊಳಲ್ಕೆರೆ ಪಟ್ಟಣದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ ಜಯಂತೋತ್ಸವ ಕಾರ್ಯಕ್ರಮವನ್ನ ಅದ್ದೂರಿಯಾಗಿ ನಡೆಸಲಾಯ್ತು.ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ BJP ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟನೆ ಮಾಡಿದರು. ವೇಧಿಕೆಯಲ್ಲಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ BYV ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಿರಿಗೆರೆ ಶ್ರೀ, ಶಾಂತವೀರ ಶ್ರೀ, ಸಂಸದ ಕಾರಜೋಳ, ಶಾಸಕ ಎಂ.ಚಂದ್ರಪ್ಪ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು. ಇನ್ನೂ ರಾಜ್ಯದ ಮೂಲೆ ಮೂಲೆಗಳಿಂದ ಶ್ರೀಗುರು ಸಿದ್ದರಾಮೇಶ್ವರರ ಭಕ್ತರು ಭಾಗಿಯಾಗಿದ್ದರು