ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ರವರು ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಹಲಸೂರು ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನೀಡಿದ ನಿರ್ದೇಶನದ ಮೇರೆಗೆ, ಇಂದು ಹಲಸೂರು ಕೆರೆಯ ಆವರಣದಲ್ಲಿ ಸಮಗ್ರ ಸ್ವಚ್ಛತಾ ಕಾರ್ಯ ನಡೆಸಲಾಗಿದೆ. ಇದರೊಂದಿಗೆ, ಕೆ.ಆರ್. ಮಾರುಕಟ್ಟೆ ಮತ್ತು ಬಿ.ಜಿ.ಎಸ್. ಮೇಲ್ಸೇತುವೆ ಪ್ರದೇಶಗಳಲ್ಲಿ ತೀವ್ರ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದ್ದು, ಕಟ್ಟಡ ಭಗ್ನಾವಶೇಷಗಳು ಮತ್ತು ಘನತ್ಯಾಜ್ಯವನ್ನು ತೆರವುಗೊಳಿಸಲಾಯಿತು. ಸಿ.ವಿ. ರಾಮನ್ ನಗರ ಕ್ಷೇತ್ರದ ಸುರಂಜನ್ ದಾಸ್ ರಸ್ತೆಯ ಸರ್ವಿಸ್ ರಸ್ತೆಯಲ್ಲಿ ಡಾಂಬರೀಕರಣ ಕಾರ್ಯ ಪೂರ್ಣಗೊಳಿಸಲಾಗಿದ್ದು, ರಸ್ತೆ ಗುಣಮಟ್ಟವನ್ನು ಸುಧಾರಿಸಲಾಗಿದೆ.